ಕರ್ನಾಟಕ ಬಜೆಟ್ 2017-18: ಒಂದು ನೋಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017-18ನೇ ಸಾಲಿನ ರಾಜ್ಯ ಆಯವ್ಯಯವನ್ನು ಮಂಡಿಸಿದರು. ಇದು ಸಿದ್ದರಾಮಯ್ಯ ಅವರು ಮಂಡಿಸಿದ ಒಂಬತ್ತನೇ ಆಯವ್ಯಯ ಆಗಿದೆ. ಬಜೆಟ್ ನ ಪ್ರಮುಖಾಂಶಗಳು ಇಂತಿವೆ.

ಆಯವ್ಯಯ ಗಾತ್ರ (ಸಂಚಿತ ನಿಧಿ)-1,86,561 ಕೋಟಿ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 14.16 ರಷ್ಟು ಹೆಚ್ಚಳ.

ಒಟ್ಟು ಸ್ವೀಕೃತಿ: 1,82,119 ಕೋಟಿ ರೂ, ರಾಜಸ್ವ ಸ್ವೀಕೃತಿ 1,44,892 ಕೋಟಿ ಮತ್ತು 37,092 ಕೋಟಿ ರೂ ಸಾಲ ಮತ್ತು 135 ಕೋಟಿ ರೂ ಬಂಡವಾಳ ಸ್ವೀಕೃತಿ.

ಒಟ್ಟು ವೆಚ್ಚ: 1,86,561 ಕೋಟಿ ರೂ, ರಾಜಸ್ವ ವೆಚ್ಚ-1,44,75 ಕೋಟಿ ರೂ, ಬಂಡವಾಳ ವೆಚ್ಚ 33,630 ಕೋಟಿ ಹಾಗೂ ಸಾಲ ಮರು ಪಾವತಿ 8,176 ಕೋಟಿ.

ಯಾವ ಕ್ಷೇತ್ರಕ್ಕೆ ಎಷ್ಟು?

  • ಜಲಸಂಪನ್ಮೂಲ್ ಕ್ಷೇತ್ರಕ್ಕೆ 11,349 ಕೋಟಿ ರೂ, ಶಿಕ್ಷಣ ಕ್ಷೇತ್ರಕ್ಕೆ 21,305 ಕೋಟಿ ರೂ, ಇಂಧನ ಕ್ಷೇತ್ರಕ್ಕೆ 11,693 ಕೋಟಿ ರೂ, ನಗರಾಭಿವೃದ್ಧಿಗೆ 9995 ಕೋಟಿ ರೂ, ಸಮಾಜ ಕಲ್ಯಾಣ ಕ್ಷೇತ್ರಕ್ಕೆ 6475 ಕೋಟಿ ರೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಕ್ಕೆ 3670 ಕೋಟಿ ರೂ, ಲೋಕೋಪಯೋಗಿ 6634 ಕೋಟಿ ರೂ, ಗ್ರಾಮೀಣಾಭಿವೃದ್ಧಿಗೆ 9361 ಕೋಟಿ ರೂ, ಬಿಬಿಎಂಪಿಗೆ 1527 ಕೋಟಿ ರೂ.

ತೆರಿಗೆ ಪ್ರಸ್ತಾವನೆಗಳು

  • ಸಿರಿಧಾನ್ಯಗಳಾದ ನವಣೆ, ಸಾಮೆ ಹಿಟ್ಟುಗಳಿಗೆ ತೆರಿಗೆ ವಿನಾಯಿತಿ;

ಸರಕು ಮತ್ತು ಸೇವಾ ತೆರಿಗೆ

  • ಸರಕು ಮತ್ತು ಸೇವಾ ತೆರಿಗೆಯನ್ನು 01ನೇ ಜುಲೈ 2017 ರಿಂದ ದೇಶದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
  • ಕರ್ನಾಟಕವು ಸರಕು ಮತ್ತು ಸೇವಾ ತೆರಿಗೆಯಲ್ಲಿ ದೇಶದಲ್ಲಿಯೇ ಅತೀ ಹೆಚ್ಚಿನ ಮಟ್ಟದ ಸ್ಥಿತ್ಯಂತರದ ಪ್ರಗತಿಯನ್ನು ಸಾಧಿಸಿದೆ.
  • ಸರಕು ಮತ್ತು ಸೇವಾ ತೆರಿಗೆಯ ಕುರಿತು ಅರಿವು ಮೂಡಿಸಲು ಕರದಾತರು ಹಾಗೂ ವೃತ್ತಿನಿರತರೊಂದಿಗೆ ಸಂಹವನಕ್ಕಾಗಿ 100 ಕ್ಕೂಹೆಚ್ಚು ಕಾರ್ಯಾಗಾರಗಳ ಹಾಗೂ ರೋಡ್ ಶೋಗಳ ಮೂಲಕ ಬೃಹತ್ ಪ್ರಮಾಣದ ಸಂಪರ್ಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
  • ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಸಾಕಷ್ಟು ಸಾಮರ್ಥ್ಯ ಸಂವರ್ಧನೆಗಾಗಿ ಇಲಾಖೆಯ 3000ಕ್ಕೂ ಹೆಚ್ಚಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದೆ.

ಮೌಲ್ಯವರ್ಧಿತ ತೆರಿಗೆ

  • ಪರಿಹಾರಗಳು ಮತ್ತು ಸುಧಾರಣಾ ಕ್ರಮಗಳು
  • ಭತ್ತ, ಅಕ್ಕಿ, ಗೋಧಿ, ಬೇಳೆ ಕಾಳುಗಳು ಹಾಗೂ ಅಕ್ಕಿ, ರಾಗಿರೈಸ್ (ಸಂಸ್ಕರಿಸಿದ ರಾಗಿ) ಮತ್ತು ಗೋಧಿ ಪದಾರ್ಥಗಳ ಮೇಲಿನ ತೆರಿಗೆಯ ವಿನಾಯಿತಿಗೊಳಿಸಲಾಗಿದೆ.
  • ಸಿರಿಧಾನ್ಯಗಳಾದ ನವಣೆ, ಸಾಮೆ, ಆರಕ ಮತ್ತು ಬರಗು ಇವುಗಳ ಹಿಟ್ಟುಗಳನ್ನು ತೆರಿಗೆಯಿಂದ ವಿನಾಯಿತಿಗೊಳಿಸಲಾಗಿದೆ.
  • ದ್ವಿದಳ ಧಾನ್ಯಗಳು ಮತ್ತು ತೆಂಗಿನಕಾಯಿಯ ಸಿಪ್ಪೆಯ ಮೇಲಿನ ತೆರಿಗೆಯನ್ನು ವಿನಾಯಿತಿಗೊಳಿಸಲಾಗಿದೆ.

ಆಡಳಿತಾತ್ಮಕ ಕ್ರಮಗಳು

  • 2003ರ ಕರ್ನಾಟಕ ಮೌಲ್ಯವರ್ಧಿತ ತೆರಿಗೆ ಕಾಯ್ದೆಯ ಪ್ರಕರಣ 40ಕ್ಕೆ ತಿದ್ದುಪಡಿ ಮಾಡುವ ಮೂಲಕ 2012-13 ಹಾಗೂ 2013-14ರ ತೆರಿಗೆ ಅವಧಿಗಳಿಗೆ ಸಂಬಂಧಿಸಿದ ಕರನಿರ್ಧರಣೆ ಅಥವಾ ಮರುಕರ ನಿರ್ಧರಣೆಗಳನ್ನು ಅಂತಿಮಗೊಳಿಸಲು ಇದ್ದ ಟಡೆರತಯುಇಉಯತರೆಡೆಒಂದು ವರ್ಷ ವಿಸ್ತರಿಸಲಾಗಿದೆ.
  • ಪ್ರಕರಣ 40 ಕ್ಕೆ ತಿದ್ದುಪಡಿ ಮಾಡುವ ಮೂಲಕ ಕರನಿರ್ಧರಣೆ ಅಥವಾ ಮರುಕರನಿರ್ಧರಣೆಗೆ ಕಾಲಮಿತಿಯನ್ನು ಪರಿಗಣಿಸುವಾಗ ಮರುಪರಿಶೀಲನಾ ನಡಾವಳಿಗಳನ್ನು ವಿಲೇ ಮಾಡಲು ತೆಗೆದುಕೊಳ್ಳುವ ಅವಧಿಯನ್ನು ಹೊರತುಪಡಿಸಲಾಗಿದೆ.
  • ಬಾಕಿ ಇರುವ ಪೂರ್ಣ ತೆರಿಗೆ ಮತ್ತು ಬಾಕಿ ಇರುವ ಬಡ್ಡಿ ಮತ್ತು ದಂಡದ ಶೇಕಡಾ 10ರಷ್ಟನ್ನು 31ನೇ ಮೇ 2017 ರ ಒಳಗೆ ಪಾವತಿಸಿದಲ್ಲಿ, ಇನ್ನುಳಿದ ಶೇಕಡಾ 90 ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡಲು ಅನುಕೂಲವಾಗುವಂತೆ ಕರಸಮಾಧಾನ ಯೋಜನೆಯನ್ನು ಜಾರಿಗೆ ತರಲಾಗಿದೆ

ಬಜೆಟ್ ಪ್ರಸ್ತಾವನೆಗಳ ವಿವರ

  • ಜಿಲ್ಲೆಗಳಲ್ಲಿ ಹೊಸ ತಾಲೂಕುಗಳ ಘೋಷಣೆ
  • ಅಮ್ಯಾ ಕ್ಯಾಂಟೀನ್ ಮಾದರಿಯಲ್ಲೇ ಬೆಂಗಳೂರಿನ ಪ್ರತೀ ವಾರ್ಡ್ ತಲಾ ಒಂದರಂತೆ 198 ನಮ್ಮ ಕ್ಯಾಂಟೀನ್ ಸ್ಥಾಪನೆ. 5 ರುಪಾಯಿಗೆ ತಿಂಡಿ, 10 ರುಪಾಯಿಗೆ ಊಟ..ಇದು ನಮ್ಮ ಕ್ಯಾಂಟೀನ್ ವಿಶೇಷತೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್.
  • 2 ಲಕ್ಷ ಮಹಿಳೆಯರಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆ. ಹೊಸ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣಕ್ಕೆ 300 ಕೋಟಿ ಅನುದಾನ.
  • ರೈತರ ಸಾಲ ಮನ್ನಾ ಇಲ್ಲ. ಸಾಲ ಮರುಪಾವತಿ ಅವಧಿ ವಿಸ್ತರಣೆ. ಶೂನ್ಯ ಬಡ್ಡಿದರದಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ ಮುಂದುವರಿಕೆ. 30 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆ ಕಾರ್ಯ
  • ಅಪಘಾತದಲ್ಲಿ ಹಸು, ಎತ್ತು ಸಾವನ್ನಪ್ಪಿದರೆ 10 ಸಾವಿರ ರೂಪಾಯಿ ಪರಿಹಾರ.
  • ಅನ್ನಭಾಗ್ಯ ಅಕ್ಕಿ 5ಕೆಜಿಯಿಂದ 7ಕೆಜಿಗೆ ಏರಿಕೆ. ಅನ್ನಭಾಗ್ಯದ ಅಕ್ಕಿ ಕುಟಂಬಕ್ಕೆ 35ಕೆಜಿಗೆ ಏರಿಕೆ.
  • ಚಿತ್ರದುರ್ಗ, ಬಾಗಲಕೋಟೆ, ಹಾವೇರಿ, ಯಾದಗಿರಿ, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ. ದಾವಣಗೆರೆ, ತುಮಕೂರು, ವಿಜಯಪುರ, ಕೋಲಾರ, ರಾಮನಗರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ. ರಾಜ್ಯದ ಗ್ರಾಮೀಣ ಭಾಗಗಳಲ್ಲಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 25 ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ
  • 2017-18ನೇ ಸಾಲಿನಲ್ಲಿ 1,86, 561 ಕೋಟಿ ರುಪಾಯಿ ಗಾತ್ರದ ಬಜೆಟ್ ಮಂಡನೆ. 25 ಲಕ್ಷ ರೈತರಿಗೆ 13, 500 ಕೋಟಿ ರುಪಾಯಿ ಕೃಷಿ ಸಾಲ ನೀಡುವ ಗುರಿ.
  • ಅಂಗನವಾಡಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ. ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ 5ದಿನ ಮಕ್ಕಳಿಗೆ ಹಾಲು ವಿತರಣೆ.
  • ಕೆರೆ ಸಂಜೀವಿನಿ ಯೋಜನೆ. 3 ಸಾವಿರ ಕೋಟಿ ರುಪಾಯಿ ವೆಚ್ಚದಲ್ಲಿ ನೀರಾವರಿ ಯೋಜನೆ. 42 ಕೋಟಿ ರೂಪಾಯಿ ವೆಚ್ಚದಲ್ಲಿ 10 ಕೆರೆಗಳ ಅಭಿವೃದ್ಧಿ. ಕೊಳಚೆ ಪ್ರದೇಶದ ನಿವಾಸಿಗಳಿಗೆ ಉಚಿತ ಕುಡಿಯುವ ನೀರಿನ ಯೋಜನೆ. ತಿಂಗಳಿಗೆ 10 ಸಾವಿರ ಲೀಟರ್ ಉಚಿತ ಕುಡಿಯುವ ನೀರು ವಿತರಣೆ.
  • ಸರಕು ಸೇವಾ ತೆರಿಗೆ ಜಾರಿ ಹಿನ್ನೆಲೆಯಲ್ಲಿ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಗೋಧಿ ಪದಾರ್ಥಗಳ ಮೇಲಿನ ತೆರಿಗೆ ವಿನಾಯ್ತಿ ಮುಂದುವರಿಕೆ.
  • ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗಾಗಿ 145 ಚಿಕಿತ್ಸಾ ಘಟಕ ಸ್ಥಾಪನೆ.
  • ಬೆಳೆಗಳ ಮೇಲಿನ ತೆರಿಗೆ ವಿನಾಯ್ತಿ ಮುಂದುವರಿಕೆ. ಭತ್ತ, ಅಕ್ಕಿ, ಗೋಧಿ, ಕಾಳುಗಳ ಮೇಲೆ ತೆರಿಗೆ ವಿನಾಯ್ತಿ.
  • ತುಂತುರು ನೀರಾವರಿ ಯೋಜನೆಗೆ 375 ಕೋಟಿ ಅನುದಾನ. ಕೃಷಿ ಇಲಾಖೆಗೆ 5080 ಕೋಟಿ ರೂಪಾಯಿ ಅನುದಾನ.
  • ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್.
  • ಖಾಸಗಿ ಸಂಸ್ಥೆಗಳಲ್ಲಿ ಎಸ್ ಸಿ, ಎಸ್ ಟಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಆಶಾದೀಪ ಯೋಜನೆ. ಪರಿಶಿಷ್ಟ, ಜಾತಿ ಮತ್ತು ಪಂಗಡಗಳ ನಿರುದ್ಯೋಗಿಗಳಿಗೆ 3 ಲಕ್ಷ ಅನುದಾನ.
  • ಶ್ರವಣಬೆಳಗೊಳ ಮಹಾಮಸ್ತಾಕಾಭಿಷೇಕಕ್ಕೆ 175 ಕೋಟಿ.
  • 1 ಲಕ್ಷ ದ್ವಿಚಕ್ರ ವಾಹನಗಳ ಮೇಲಿನ ತೆರಿಗೆ ಹೆಚ್ಚಳ.
  • ಮಲ್ಟಿಪ್ಲೆಕ್ಸ್ ಗಳಲ್ಲಿನ ಚಿತ್ರಮಂದಿರದ ಟಿಕೆಟ್ ದರ 200ಕ್ಕೆ ನಿಗದಿ. ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಮೈಸೂರಿನ ಹಿಮ್ಮಾವು ಎಂಬಲ್ಲಿ ಚಿತ್ರನಗರಿ ನಿರ್ಮಾಣ.
  • ಎಪಿಎಂಪಿಸಿಯಲ್ಲಿ ವೈಜ್ಞಾನಿಕವಾಗಿ ಹಣ್ಣು ಮಾಗಿಸುವ ವ್ಯವಸ್ಥೆಗೆ 10 ಕೋಟಿ ಮೀಸಲು
  • ಮದ್ಯದ ಮೇಲೆ ಹೆಚ್ಚುವರಿ ಅಬಕಾರಿ ಸುಂಕ. ಬಿಯರ್, ಫೆನ್ನಿ, ಲಿಕ್ಕರ್, ವೈನ್ ಮೇಲಿನ ಮೌಲ್ಯವರ್ಧಿತ ತೆರಿಗೆ ರದ್ದು. ಅಬಕಾರಿ ಶುಲ್ಕದಲ್ಲಿ ಹೆಚ್ಚಳ. ರಾಜ್ಯದಲ್ಲಿ ನೀರಾ ನೀತಿ ಜಾರಿ. ರಾಜ್ಯ ಅಬಕಾರಿ ಕಾಯ್ದೆಗೆ ತಿದ್ದುಪಡಿ.
  • 2,200 ಕೋಟಿ ರೂಪಾಯಿ ವೆಚ್ಚದಲ್ಲಿ ಶುದ್ದ ಕುಡಿಯುವ ನೀರಿನ ಘಟಕ. ಕೆರೆ ಸಂಜೀವಿನಿ ಯೋಜನೆಗೆ 100 ಕೋಟಿ ರೂಪಾಯಿ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ಯೋಜನೆ.
  • ಸ್ವಾತಂತ್ರ್ಯ ಯೋಧರ ಮಾಸಾಶನ 8,000 ರೂಗಳಿಂದ 10,000 ರೂಗಳಿಗೆ ಮತ್ತು ಗೋವಾ ವಿಮೋಚನಾ ಹೋರಾಟಗಾರರ ಮಾಸಾಶನ 3,000 ರೂಗಳಿಂದ 4,000 ರೂಗಳಿಗೆ ಹೆಚ್ಚಳ.
  • ಬೆಂಗಳೂರನ್ನು ವಿದ್ಯೂತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ರೂಪಿಸಲು ಚಿಂತನೆ. ಬೆಂಗಳೂರಿನ ಐಐಐಟಿಯಲ್ಲಿ ರೋಬೋಟಿಕ್ ಕೇಂದ್ರ ಸ್ಥಾಪನೆಗೆ 5 ಕೋಟಿ ರೂ.
  • ಖಾದಿ, ಗ್ರಾಮೋದ್ಯಮ ಉತ್ತೇಜಿಸಲು 4 ಕೋಟಿ ರೂ. ಕೇಂದ್ರ ಸರ್ಕಾರದ ನೆರವಿನೊಂದಿಗೆ ರಾಜ್ಯದ ಎರಡು ಕಡೆ ಖಾದಿ ಪ್ಲಾಜಾ ಸ್ಥಾಪಿಸಲು ನಿರ್ಧಾರ.
  • ರಾಜ್ಯ ಸರ್ಕಾರದಿಂದ 50 ‘ಸಾಲು ಮರದ ತಿಮ್ಮಕ್ಕ’ ವೃಕ್ಷ ಪಾರ್ಕ್ ಅಭಿವೃದ್ಧಿ.
  • ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ವಿುನಲ್ ನಿರ್ವಣಕ್ಕೆ ಕ್ರಮ.
  • ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ವಿುನಲ್ ನಿರ್ವಣಕ್ಕೆ ಕ್ರಮ.
  • ‘ಜನೌಷಧಿ ಜೆನರಿಕ್ ಔಷಧಿ ಮಳಿಗೆ’ ಯೋಜನೆ ಅಡಿಯಲ್ಲಿ 200 ಜೆನರಿಕ್ ಮೆಡಿಕಲ್ ಸ್ಟೋರ್ಗಳ ಸ್ಥಾಪನೆ.
  • ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ. ಭಾರತ ಭಾಗ್ಯವಿದಾತ ಧ್ವನಿ ಬೆಳಕು ಯೋಜನೆ. ಗೇರು ಅಭಿವೃದ್ಧಿ ಮಂಡಳಿ ಸ್ಥಾಪನೆ.
  • ಕೆಎಸ್ ಆರ್ ಟಿಸಿಗೆ 3,250 ಹೊಸ ಬಸ್ ಸೇರ್ಪಡೆ. ಬೆಂಗಳೂರು ನಗರಕ್ಕೆ 150 ಎಲೆಕ್ಟ್ರಿಕ್ ಬಸ್.
  • ಸಣ್ಣ ನೀರಾವರಿ 2099, ಪಶುಸಂಗೋಪನೆ 2245 ಕೋಟಿ, ಅರಣ್ಯ, ಪರಿಸರ ಮತ್ತು ಸಂರಕ್ಷಣೆ 1732 ಕೋಟಿ , ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 3154 ಕೋಟಿ ಅನುದಾನ.
  • ಐಟಿ, ಬಿಟಿ ವಿ‍ಜ್ಞಾನ ತಂತ್ರಜ್ಞಾನಕ್ಕೆ 299 ಕೋಟಿ, ಕಾನೂನು, ಕ್ರೀಡಾ ಮತ್ತು ಯುವಜನ 285 ಕೋಟಿ, ನ್ಯಾಯಾಲಯಕ್ಕೆ 731 ಕೋಟಿ ಅನುದಾನ.
  • ಉನ್ನತ ಶಿಕ್ಷಣಕ್ಕೆ 4401 ಕೋಟಿ, ವೈದ್ಯಕೀಯ ಶಿಕ್ಷಣಕ್ಕೆ 2004 ಕೋಟಿ, ಸಮಾಜ ಕಲ್ಯಾಣಕ್ಕೆ 6363 ಕೋಟಿ, ವಸತಿ 4708 ಕೋಟಿ, ಮೀನುಗಾರಿಕೆಗೆ 337 ಕೋಟಿ ಅನುದಾನ.
  • “ಕೆ’ ಶಿಪ್ 3 ಯೋಜನೆಯಡಿ5 ಕಿಮೀ ರಸ್ತೆ ಅಭಿವೃದ್ದಿ. 5310 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಬೆಂಗಳೂರು ನಗರದ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ. ಬೆಂಗಳೂರು, ಮಾಗಡಿ 50 ಕಿಮೀ ರಸ್ತೆ ಅಭಿವೃದ್ದಿ. 1455 ಕೋಟಿ ವೆಚ್ಚದಲ್ಲಿ 150 ಕಿಮೀ ರಸ್ತೆ ಅಭಿವೃದ್ದಿ.
  • ಶಬರಿಮಲೆಯಲ್ಲಿ ಕರ್ನಾಟಕದ ಉಪ ಕಚೇರಿ ಆರಂಭಿಸಲಾಗುವುದು. ರಾಜ್ಯದ 50ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈ ಯೋಜನೆ. ಕಚೇರಿಯಲ್ಲಿ ವೈದ್ಯಕೀಯ ಸೌಲಭ್ಯ, ಸಹಾಯವಾಣಿ ಮತ್ತು ರಕ್ಷಣೆಗಾಗಿ ಕ್ರಮ.
  • ಜೈಲುಗಳಲ್ಲಿ ಕೈದಿಗಳ ವಿಚಾರಣೆಗಾಗಿ ವಿಡಿಯೋ ಕಾನ್ಫರೆನ್ಸ್. ಬಾಲಕಾರ್ಮಿಕ ಮುಕ್ತ ರಾಜ್ಯವಾಗಿಸಲು ಯೋಜನೆ.
  • ಉತ್ತರಕರ್ನಾಟಕಕ್ಕೆ ಪ್ರತ್ಯೇಕ ಬಯಲಾಟ ಅಕಾಡೆಮಿ. ಬನವಾಸಿ ಹಾಗೂ ಸರ್ವಜ್ಞ ಪೀಠ ಅಭಿವೃದ್ಧಿಗೆ 5 ಕೋಟಿ ಮೀಸಲು.
  • ಕೃಷಿಯಲ್ಲಿ ತಾಂತ್ರಿಕ ಬಳಕೆಗೆ ಪ್ರೋತ್ಸಾಹ. ಬೇಸಾಯದಲ್ಲಿ ತಾಂತ್ರಿಕತೆ ಬಳಸುವ ರೈತರಿಗೆ ಸಹಾಯಧನ.
  • 16, 500 ನರ್ಸ್ ಗಳಿಗೆ ಕಂಪ್ಯೂಟರ್ ಟ್ಯಾಬ್ ನೀಡಲಾಗುವುದು. ಆರೋಗ್ಯಕರ, ಪರಿಸರ ಸ್ನೇಹಿ ವ್ಯವಸ್ಥೆ ಜಾರಿಗೊಳಿಸಲು ಬಾಡಿಗೆ ಸೈಕಲ್ ಒದಗಿಸುವ ಯೋಜನೆ ಜಾರಿ. ಎಲ್ಲಾ ಇಎಸ್ಐ ಆಸ್ಪತ್ರೆಗಳಲ್ಲಿ ಆಯೂಷ್ ವಿಭಾಗ ಆರಂಭ.
  • ಭಾಗ್ಯಜ್ಯೋತಿ ಯೋಜನೆಯಡಿ ನೀಡುವ ಉಚಿತ ವಿದ್ಯುತ್ 18 ಯೂನಿಟ್ ನಿಂದ 40 ಯೂನಿಟ್ ಗೆ ಏರಿಕೆ.
  • ಒಲಿಂಪಿಕ್ಸ್ ಪದಕ ವಿಜೇತರಿಗೆ ಎ ದರ್ಜೆ ಹುದ್ದೆ. ಏಷ್ಯನ್ ಮತ್ತು ಕಾಮನ್ ವೆಲ್ತ್ ಪದಕ ವಿಜೇತರಿಗೆ ಬಿ ದರ್ಜೆ ಹುದ್ದೆ. ಒಲಿಂಪಿಕ್ ಸ್ವರ್ಣ ವಿಜೇತರಿಗೆ 5 ಕೋಟಿ ಬಹುಮಾನ, ರಜತ ಪದಕ ವಿಜೇತರಿಗೆ 3 ಕೋಟಿ, ಕಂಚು ವಿಜೇತರಿಗೆ 2 ಕೋಟಿ.
  • ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ
  • ವೃದ್ಧಾಪ್ಯ ವೇತನ 200 ರಿಂದ 500 ರುಪಾಯಿಗೆ ಹೆಚ್ಚಳ. 60ರಿಂದ 64 ವಯಸ್ಸಿನ ವೃದ್ಧರಿಗೆ ಈ ಯೋಜನೆ ಲಾಭ.
  • ವಿಶ್ವಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ. 60 ವರ್ಷಗಳ ಏಕೀಕರಣ ಸವಿನೆನಪಿಗಾಗಿ ವಿಶ್ವಕನ್ನಡ ಸಮ್ಮೇಳನ.
  • ಶೌಚಾಲಯಕ್ಕಾಗಿ ಸಮರ ಎಂಬ ಹೆಸರಿನಲ್ಲಿ ಯೋಜನೆ. 28 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಕ್ರಮ.
  • ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂಪಾಯಿ ವಿಶೇಷ ಗೌರವಧನ.
  • ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ 2 ಸಾವಿರ ರೂಪಾಯಿ ಪಿಂಚಣಿ. ಗ್ರಾಮಗಳಲ್ಲಿ ಸಮುದಾಯ ದನದ ಕೊಟ್ಟಿಗೆ ನಿರ್ಮಾಣ. “ನಮ್ಮ ಹೊಲ, ನಮ್ಮ ದಾರಿ ಯೋಜನೆಯಡಿ ಮಣ್ಣಿನ ರಸ್ತೆ. 25 ಕಿ.ಮೀ. ಉದ್ದದ ಹೊಲಗಳಿಗೆ ಹೋಗುವ ಮಣ್ಣಿನ ರಸ್ತೆ.
  • ಬೆಂಗಳೂರಿನಲ್ಲಿ ಉಪನಗರ ಯೋಜನೆ. ರಾಜ್ಯದಲ್ಲಿ ಹೊಸದಾಗಿ 460 ಗ್ರಾಮ ಪಂಚಾಯ್ತಿಗಳ ಆರಂಭ.
  • ಕರಾವಳಿ ವ್ಯಾಪ್ತಿಯಲ್ಲಿ ಪಶ್ಚಿಮ ವಾಹಿನಿ ಯೋಜನೆ. ಚಿಕ್ಕಮಗಳೂರು, ಹಾಸನದಲ್ಲಿ ಚೆಕ್ ಡ್ಯಾಂ ನಿರ್ಮಾಣ.
  • ಜನಪ್ರತಿನಿಧಿಗಳ ಗೌರವಧನ ಹೆಚ್ಚಳ. ತಾಪಂ ಅಧ್ಯಕ್ಷರ ಗೌರವಧನ5ರಿಂದ 6 ಸಾವಿರಕ್ಕೆ ಏರಿಕೆ. ಜಿಪಂ ಸದಸ್ಯರ ಗೌರವಧನ 3 ಸಾವಿರದಿಂದ 5 ಸಾವಿರಕ್ಕೆ ಏರಿಕೆ. ತಾಲೂಕು ಪಂಚಾಯ್ತಿ ಸದಸ್ಯರ ಗೌರವಧನ 3 ಸಾವಿರ ಮತ್ತು ಗ್ರಾ.ಪಂ ಸದಸ್ಯರ ಗೌರವಧನ 1 ಸಾವಿರಕ್ಕೆ ಏರಿಕೆ.
  • ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ.
  • ಮಾತೃಪೂರ್ಣ ಯೋಜನೆಗೆ 302 ಕೋಟಿ ಅನುದಾನ, ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಬಿಸಿಯೂಟ. ಪೌಷ್ಠಿಕಾಂಶ ಕೊರತೆ ನಿವಾರಣೆಗೆ ಮಾತೃಪೂರ್ಣ ಯೋಜನೆ ಜಾರಿ.
  • ಹೆಬ್ಬಾಳ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಾಣ. ಮೇಲ್ಸೆತುವೆ ಅಗಲಿಕರಣಕ್ಕೆ 88 ಕೋಟಿ ಅನುದಾನ. 690 ಕೋಟಿ ವೆಚ್ಚದಲ್ಲಿ ರಸ್ತೆಗಳ ಮೇಲ್ದರ್ಜೆಗೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 43 ಪ್ರಮುಖ ರಸ್ತೆಗಳ ಅಭಿವೃದ್ಧಿ. ಟೆಂಡರ್ ಶ್ಯೂರ್ ಮಾದರಿಯಲ್ಲಿ 25 ಕಿ.ಮೀ ರಸ್ತೆ ಅಭಿವೃದ್ದಿ.
  • ಕೃಷಿ ಕ್ಷೇತ್ರಕ್ಕೆ 5080 ಕೋಟಿ ರೂಪಾಯಿ ಮೀಸಲು, ಮಾವು ಬೆಳೆಗಾರರ ಉತ್ತೇಜನಕ್ಕೆ 88 ಕೋಟಿ ಮೀಸಲು.
  • ರಾಜ್ಯದ 16 ಪ್ರವಾಸಿ ಕೇಂದ್ರಗಳು ವಿಶ್ವದರ್ಜೆಗೆ.
  • ನಮ್ಮ ಮೆಟ್ರೋ ಹೆಚ್ಚುವರಿ ಮಾರ್ಗ ನಿರ್ಮಾಣ. ಸಿಲ್ಕ್ ಬೋರ್ಡ್ ನಿಂದ ಕೆಆರ್ ಪುರಂ ಜಂಕ್ಷನ್ ವರೆಗೆ ಮಾರ್ಗ. ಡಯಲ್ 100 ಜಿಲ್ಲಾ ಕೇಂದ್ರಗಳಿಗೂ ವಿಸ್ತರಣೆ.
  • ನಿವೃತ್ತ ಪತ್ರಕರ್ತರ ಮಾಸಾಶನ 8 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳ. ಜಿಲ್ಲಾ ಕೇಂದ್ರಗಳಲ್ಲಿನ ಪತ್ರಕರ್ತರಿಗೆ ಉಚಿತ ಬಸ್ ಪಾಸ್.
  • ಕಲಬುರಗಿಯಲ್ಲಿ ಪೊಲೀಸ್ ಆಯುಕ್ತಾಲಯ ಸ್ಥಾಪನೆ. ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆಗೆ 10 ಕೋಟಿ ಅನುದಾನ.
  • 2 ಸ್ಟ್ರೋಕ್ ಆಟೋಗಳ ರದ್ದತಿಗೆ ಕ್ರಮ. 4 ಸ್ಟ್ರೋಕ್ ಎಲ್ ಪಿಜಿ 10 ಸಾವಿರ ಆಟೋಗಳಿಗೆ 30 ಸಾವಿರ ರೂ. ಸಹಾಯಧನ.
  • ಚಿಂತಾಮಣಿ, ರಾಣೆಬೆನ್ನೂರು, ಬಂಟ್ವಾಳದಲ್ಲಿ ಆರ್ ಟಿ ಒ ಸ್ಥಾಪನೆ.
  • ಹಂತಗಳಲ್ಲಿ 1191 ಪಿಯು ಉಪನ್ಯಾಸಕರ ನೇಮಕ. ರಾಯಚೂರಿನಲ್ಲಿ ಹೊಸ ವಿವಿ ಸ್ಥಾಪನೆ. 1626 ಪ್ರೌಢಶಿಕ್ಷಕರ ನೇಮಕ. ಪ್ರೌಢಶಿಕ್ಷಣ ಇಲಾಖೆಗೆ 18, 266 ಕೋಟಿ ರೂಪಾಯಿ ಮೀಸಲು.
  • ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ,ಕಾಪು ಹೊಸ ತಾಲೂಕುಗಳಾಗಿ ಘೋಷಣೆ. ರಾಯಚೂದು ಜಿಲ್ಲೆಯ ಮಸ್ಕಿ, ಸಿರವಾರ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಕಡಬ ಹೊಸ ತಾಲೂಕುಗಳಾಗಿ ಘೋಷಣೆ.
  • ಬೆಂಗಳೂರಿನಲ್ಲಿ ವಾಯು, ಶಬ್ದ ಮಾಲಿನ್ಯ ತಡೆಗೆ ಕ್ರಮ. ಬೆಂಗಳೂರಿನ ಸಬ್ ಅರ್ಬನ್ ರೈಲ್ವೆ ಯೋಜನೆಗೆ 345 ಕೋಟಿ.
  • ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ 10 ಕೋಟಿ ರುಪಾಯಿ ಅನುದಾನ. ತೋಟಗಾರಿಕೆ ಇಲಾಖೆಗೆ 1091 ಕೋಟಿ ಅನುದಾನ.ದುಬಾರಿ ದ್ವಿಚಕ್ರ ವಾಹನ ಕೊಳ್ಳುವವರಿಗೆ ಬರೆ.
  • ಮಡಿಕೇರಿ, ಕಾರವಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಏರ್ ಸ್ಟ್ರಿಪ್ ನಿರ್ಮಾಣ. 10 ಸಾವಿರ ಉತ್ಕೃಷ್ಟ ಟಗರು ಉತ್ಪಾದನಾ ಘಟಕ. ರಾಜ್ಯದ ಪ್ರತೀ ಮಾಂಸದಂಗಡಿಗೆ25 ಲಕ್ಷ ರೂ. ಅನುದಾನ
  • ಉನ್ನತ ಶಿಕ್ಷಣ ಇಲಾಖೆಗೆ ಒಟ್ಟು 4,401 ಕೋಟಿ ರೂಪಾಯಿ ಅನುದಾನ. ಶಾಲಾ ನಿರ್ವಹಣೆ, ಸುಧಾರಣೆಗೆ ಶಿಕ್ಷಣ ಕಿರಣ ಯೋಜನೆ ಜಾರಿ. ಹಂಪಿ ಕನ್ನಡ ವಿವಿಗೆ 25 ಕೋಟಿ ಯೋಜನೆ. ಗ್ರಾಮೀಣ ಪ್ರದೇಶದಲ್ಲಿ 25 ಪಾಲಿಟೆಕ್ನಿಕ್ ಕಾಲೇಜು ಆರಂಭ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 23 ಹೊಸ ಮಹಿಳಾ ಹಾಸ್ಟೆಲ್ ನಿರ್ಮಾಣ.
  • ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವೈಫೈ ಯೋಜನೆ. ಖಾಸಗಿ ಸಂಸ್ಥೆಗಳಲ್ಲಿ ನಿವೃತ್ತಿ ವಯಸ್ಸು 58ರಿಂದ 60ಕ್ಕೆ ಏರಿಕೆ.
  • ಬೆಂಗಳೂರು ವನ್ ಮಾದರಿಯಲ್ಲಿ ಕರ್ನಾಟಕ ವನ್. ರಾಜ್ಯದ 9 ಜಿಲ್ಲೆಗಳಲ್ಲಿ ಕರ್ನಾಟಕ ವನ್ ಕೇಂದ್ರ ಸ್ಥಾಪನೆ.

Leave a Comment

This site uses Akismet to reduce spam. Learn how your comment data is processed.